ಇನ್ನು ಈ ವೇಳೆ ಮಾತನಾಡಿದ ಮಮತಾ ಬ್ಯಾನರ್ಜಿ ನೀವು ಟಿಎಂಸಿ ಕಾರ್ಯಕರ್ತರನ್ನು ಥಳಿಸಿದಾಗ ನಾನು ಬೀದಿಗಿಳಿದು ಹೋರಾಟ ಮಾಡಿರಲಿಲ್ಲ. ಆದರೆ ಕೋಲ್ಕತಾ ಪೊಲೀಸ್ ಇಲಾಖೆಗೆ ಅವಮಾನ ಮಾಡಲು ಯತ್ನಿಸಿದಾಗ ಓರ್ವ ಸಿಎಂ ಅದನ್ನು ನೋಡಿಕೊಂಡು ಸುಮ್ಮನೆ ಕುಳಿತಿರಲು ಸಾಧ್ಯವಿಲ್ಲ. ಇಲಾಖೆಯ ಘನತೆ ಗೌರವ ಎತ್ತಿಹಿಡಿಯುವುದು ಈ ರಾಜ್ಯದ ಪ್ರತೀಯೊಬ್ಬ ನಾಗರೀಕನ ಕರ್ತವ್ಯ ಎಂದು ಮಮತಾ ಹೇಳಿದರು.