ಸುಪ್ರೀಂ ಕೋರ್ಟ್ ಆಧಾರ್ ಕಾರ್ಡಿಗೆ ಇರುವ ಸಂವಿಧಾನಿಕ ಮಾನ್ಯತೆಯನ್ನು ಸೆಪ್ಟೆಂಬರ್ ತೀರ್ಪಿನಲ್ಲಿ ಎತ್ತಿ ಹಿಡಿದಿತ್ತು. ಆದರೂ ಬ್ಯಾಂಕ್ ಖಾತೆ, ಮೊಬೈಲ್ ಫೋನ್ ಮತ್ತು ಶಾಲಾ ಪ್ರವೇಶಕ್ಕೆ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಹೇಳಿತ್ತು. ಆದರೆ ಈಗ ನ್ಯಾಯಾಲಯ ಐಟಿ ರಿಟರ್ನ್ಸ್ ಸಲ್ಲಿಕೆ ಮಾಡಲು ವೈಯಕ್ತಿಕ ಆಧಾರ್ ಸಂಖ್ಯೆಯನ್ನು ಒದಗಿಸುವುದನ್ನು ಕಡ್ಡಾಯ ಮಾಡಿದೆ. ಅಲ್ಲದೆ ಆಧಾರ್ ಕಾರ್ಡನ್ನು ಪಾನ್ ಕಾರ್ಡಿಗೆ ಲಿಂಕ್ ಮಾಡಲು 2019 ಮಾರ್ಚ್ 31 ರವರೆಗೂ ಸಮಯಾವಕಾಶವನ್ನು ನೀಡಿದೆ.