ಕನಿಮೋಳಿ ಅವರು ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದು, ತೂತುಕುಡಿಯಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿಗಳಿದ್ದವು. ಕನಿಮೋಳಿ ಸಹ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸುಳಿವು ನೀಡಿದ್ದರು. ಇದೀಗ ಡಿಎಂಕೆ ಶಾಸಕಿ ಗೀತಾ ಜೀವನ್ ಅವರು ಡಿಎಂಕೆ ಯುವ ಘಟಕದ ಕಾರ್ಯದರ್ಶಿಯಾಗಿರುವ ಕನಿಮೋಳಿ ತೂತುಕುಡಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದಾರೆ.