ಧರಣಿಯಲ್ಲಿ ಭಾಗಿಯಾದ ರಾಜ್ಯದ ಪೊಲೀಸ್ ಮಹಾ ನಿರ್ದೇಶಕ ವೀರೇಂದ್ರ, ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ವಿನೀತ್ಕುಮಾರ್ ಗೋಯಲ್, ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅನುಜ್ ಶರ್ಮಾ, ಬಿಧಾನ್ನಗರ ಕಮಿಷನರೇಟ್ನ ಪೊಲೀಸ್ ಆಯುಕ್ತ ಗ್ಯಾನವಂತ್ ಸಿಂಗ್ ಮತ್ತು ಹೆಚ್ಚುವರಿ ಪೊಲೀಸ್ ಆಯುಕ್ತ (ಕೋಲ್ಕೊತಾ) ಸುಪ್ರತಿಮ್ ದರ್ಕಾರ್ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚನೆ ನೀಡಿದೆ. ಆದರೆ ಇಂತಹ ಯಾವುದೇ ನಿರ್ದೇಶನ ಕೇಂದ್ರದಿಂದ ಬಂದಿಲ್ಲ, ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.