ಈ ಬಗ್ಗೆ ಆಂಧ್ರ ಪ್ರದೇಶ ಆಡಳಿತ ಇಲಾಖೆ ಮಾಹಿತಿ ನೀಡಿದ್ದು, ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ದೆಹಲಿಯಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ರ್ಯಾಲಿಗೆ ಸುಮಾರು 1.12 ಕೋಟಿ ರೂ ಹಣ ವೆಚ್ಚವಾಗಿದೆ ಎಂದು ಹೇಳಿದೆ. ಅಲ್ಲದೆ ಪ್ರತಿಭಟನೆಗೆ ಆಂಧ್ರ ಪ್ರದೇಶದಿಂದ ದೆಹಲಿಗೆ ಜನರನ್ನು ಕೊಂಡೊಯ್ಯಲು 2 ವಿಶೇಷ ರೈಲುಗಳನ್ನು ಬುಕ್ ಮಾಡಲಾಗಿದ್ದು, ದಕ್ಷಿಣ ರೈಲ್ವೇ ಇಲಾಖೆಯಿಂದ ತಲಾ 20 ಬೋಗಿಗಳ 2 ರೈಲುಗಳನ್ನು ಬುಕ್ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.