ಉತ್ತರ ಪ್ರದೇಶದ ಮಹಾರಾಜ ಗಂಜ್ ನಲ್ಲಿ ನಡೆದ ಕಾರ್ಯರ್ತರ ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶದ ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಎಲ್ಲ ಅಕ್ರಮ ವಲಸಿಗರೂ ತಮ್ಮ ತಮ್ಮ ತವರು ಸೇರಲಿದ್ದಾರೆ ಎಂದು ಹೇಳಿದರು. ಅಂತೆಯೇ ಅಕ್ರಮ ವಲಸಿಗರೇ ಎಸ್ ಪಿ, ಬಿಎಸ್ ಪಿ ಪಕ್ಷಗಳ ಮತ ಬ್ಯಾಂಕ್ ಆಗಿದ್ದು ಇದೇ ಕಾರಣಕ್ಕೆ ಈ ಪಕ್ಷಗಳು ಅವರ ರಕ್ಷಣೆಗೆ ಮುಂದಾಗುತ್ತಿದ್ದು, ಎನ್ ಆರ್ ಸಿಗೆ ವಿರೋಧ ವ್ಯಕ್ತಪಡಿಸುತ್ತಿವೆ ಎಂದು ಹೇಳಿದರು.