ಹಿಂದೂ ಪತ್ರಿಕೆಯಲ್ಲಿ ಪ್ರಕಟಣವಾಗಿರುವ ರಹಸ್ಯ ಕಾರ್ಯಾಚರಣೆ ವರದಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅರವಿಂದ್ ಕೇಜ್ರಿವಾಲ್, ಸಿಬಿಐ ಸಂಸ್ಥೆ ಸ್ವತಂತ್ರವಾಗಿ ರಾಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಮುಂದಾಗಬೇಕು. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿ ಮೇಲೆ ದಾಳಿ ಮಾಡಿ ಅಲ್ಲಿ ಸಿಗುವ ದಾಖಲೆಗಳನ್ನು ವಶಪಡಿಸಿಕೊಂಡು ತನಿಖೆ ನಡೆಸಿದರೆ ಆಗ ರಾಫೆಲ್ ಹಗರಣದ ಸಂಪೂರ್ಣ ವಿವರ ಹೊರ ಬೀಳುತ್ತದೆ ಎಂದು ಹೇಳಿದ್ದಾರೆ.