ನಿನ್ನೆಯಷ್ಟೇ ದೆಹಲಿಯಲ್ಲಿ ನಡೆದ ಬಿಜೆಪಿ ವಿರೋಧಿ ಬಣದ ನಾಯಕರ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಪ್ರತಿಪಕ್ಷಗಳ ಹಲವು ಪ್ರಮುಖ ನಾಯಕರು ಭಾಗವಹಿಸಿದ್ದರು. ಸಭೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು.