ದಾಳಿಯ ಹಿನ್ನೆಲೆಯಲ್ಲಿ ಭಯೋತ್ಪಾದಕರ ವಿರುದ್ಧ ಕೈಗೊಳ್ಳಬೇಕಾದ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲು ನಾಳೆ ಭದ್ರತೆ ಮೇಲಿನ ಕ್ಯಾಬಿನೆಟ್ ಸಮಿತಿ ಸಭೆ ನಡೆಯಲಿದೆ. ಈ ನಡುವೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಿಶೇಷ ಡಿಐಬಿ, ಗುಪ್ತಚರ ಇಲಾಖೆ ನಿರ್ದೇಶಕ ಹಾಗೂ ಎನ್ಎಸ್ಎ ಅಜಿತ್ ದೋವಲ್ ಅವರೊಂದಿಗೆ ಮಾತನಾಡಿದ್ದಾರೆ.