ಶ್ರದ್ಧಾಂಜಲ್ಲಿ ಸಲ್ಲಿಸಲು ಜನತೆ ನೆರೆದಿದ್ದಾಗ ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಉಪೇಂದ್ರ ಕುಮಾರ್ ಶ್ರೀವೀರ್ ಬಹದ್ದೂರ್ ಏಕಾಏಕಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾನೆ. ತಕ್ಷಣವೇ ಎಚ್ಚೆತ್ತ ಪೊಲೀಸರು ಆತನನ್ನು ಬಂಧಿಸಿದ್ದು, ರಾಷ್ಟ್ರೀಯ ಏಕೀಕರಣಕ್ಕೆ ಧಕ್ಕೆ ತಂದಿರುವ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಕೋರ್ಟ್ ಈ ವ್ಯಕ್ತಿಯನ್ನು ಫೆ.18 ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.