ಭಾರತೀಯ ಸೇನೆಯ ಮೇಲೆ ಭಾರಿ ಪ್ರಮಾಣದಲ್ಲಿ ದಾಳಿ ನಡೆಸಲು ಜೈಷೆ ಮೊಹಮ್ಮದ್ ಉಗ್ರ ಸಂಘಟನೆಯು ವರ್ಷದ ಹಿಂದೆಯೇ ಪ್ಲಾನ್ ಮಾಡಿತ್ತು. ಎರಡು ದಿನಗಳ ಹಿಂದೆಯಷ್ಟೇ ಭಾರತದ ಗುಪ್ತಚರರಿಗೆ ಈ ಪ್ಲಾನ್ ಬಗ್ಗೆ ಮಾಹಿತಿ ಸಿಕ್ಕಿತ್ತು. ಅದೇ ರೀತೆ ಸೇನೆ ಸಹ ಭದ್ರತಾ ತಪಾಸಣೆ, ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿತ್ತು. ಆದರೆ ಸ್ಥಳೀಯ ಜನರಿಗೆ ಹೆದ್ದಾರಿ ಬಳಸಲು ನೀಡಲಾಗಿದ್ದ ಮುಕ್ತ ಅವಕಾಶವನ್ನು ಉಗ್ರಗಾಮಿಯೂ ತನ್ನ ಕೃತ್ಯಕ್ಕೆ ದುರ್ಬಳಕೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಾಣುತ್ತದೆ.