ಈ ಪ್ರಕರಣದಲ್ಲಿ ವದ್ರಾ ಅವರನ್ನು ಪ್ರಶ್ನಿಸುವ ಅಗತ್ಯವಿದೆ ಎಂದು ಇಡಿ ಪರ ವಕೀಲ ನಿತೀಶ್ ರಾಣಾ ಕೋರ್ಟ್ ಗೆ ತಿಳಿಸಿದ್ದಾರೆ. ಅಲ್ಲದೆ ವಾದ್ರಾ ವಿಚಾರಣೆಗೆ ಸಹಕರಿಸದ ಕಾರಣ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಬೇಕು ಎಂದೂ ಅವರು ಕೋರಿದ್ದಾರೆ. ಆದರೆ ವಾದ್ರಾ ಇಡಿ ವಾದವನ್ನು ಅಲ್ಲಗೆಳೆದಿದ್ದು "ನಾನು ಇಡಿ ಅಧಿಕಾರಿಗಳು ಕರೆ ಮಾಡಿದಾಗಲೆಲ್ಲ ವಿಚಾರಣೆಗೆ ಹಾಜರಾಗಿದ್ದೇನೆ" ಎಂದಿದ್ದಾರೆ.