ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪುಲ್ವಾಮಾ ದಾಳಿ ಬಳಿಕ ಪಾಕ್ ಗಡಿಯಲ್ಲಿ ಭಾರತೀಯ ವಾಯುಸೇನೆಯಿಂದ ಶಕ್ತಿ ಪ್ರದರ್ಶನ; ಪಾಕಿಸ್ತಾನ ಗಡಗಡ!

ಕಣಿವೆ ರಾಜ್ಯದಲ್ಲಿ ಭಯೋತ್ಪಾದಕರು ರಕ್ತದೊಕುಳಿ ಹರಿಸಿದ್ದು 40ಕ್ಕೂ ಹೆಚ್ಚು ಭಾರತೀಯ ಯೋಧರನ್ನು ಬಲಿ ಪಡೆದಿದ್ದಾರೆ. ಇಡೀ ದೇಶದಲ್ಲಿ ಪಾಕ್ ಮತ್ತು ಭಯೋತ್ಪಾದನೆ...
Published on
ಫೋಕ್ರಾನ್: ಕಣಿವೆ ರಾಜ್ಯದಲ್ಲಿ ಭಯೋತ್ಪಾದಕರು ರಕ್ತದೊಕುಳಿ ಹರಿಸಿದ್ದು 40ಕ್ಕೂ ಹೆಚ್ಚು ಭಾರತೀಯ ಯೋಧರನ್ನು ಬಲಿ ಪಡೆದಿದ್ದಾರೆ. ಇಡೀ ದೇಶದಲ್ಲಿ ಪಾಕ್ ಮತ್ತು ಭಯೋತ್ಪಾದನೆ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದೆ. ಈ ಮಧ್ಯೆ ಪೋಕ್ರಾನ್ ವಾಯುನೆಲೆಯಲ್ಲಿ ಭಾರತದ ವಾಯುಸೇನೆ ಶಕ್ತಿ ಪ್ರದರ್ಶನ ಆರಂಭಿಸಿದೆ. 
ಪುಲ್ವಾಮಾ ಉಗ್ರರ ದಾಳಿ ಬಳಿಕ ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದರು. ಇದೀಗ ಪಾಕ್ ಗಡಿಭಾಗದಲ್ಲಿ ಸೇನೆ ತನ್ನ ಶಕ್ತಿ ಪ್ರದರ್ಶನ ಆರಂಭಿಸಿದೆ. ತೇಜಸ್, ಅಡ್ವಾನ್ಸಡ್ ಲೈಟ್ ಹೆಲಿಕಾಫ್ಟರ್, ಆಕಾಶ್ ವಿಮಾನಗಳು ಹಾರಾಟ ನಡೆಸಿವೆ.
ಪೋಕ್ರಾನ್ ನಲ್ಲಿ ವಾಯು ಶಕ್ತಿ ಪ್ರದರ್ಶನ ನಡೆಯುತ್ತಿದ್ದು ಜೆಟ್ ವಿಮಾನಗಳು, ಮಿಗ್-29, ಮಿಗ್-27, ಎಎನ್-32 ಸೇರಿದಂತೆ ವಿವಿಧ ವಿಮಾನಗಳು ಪ್ರದರ್ಶನ ನೀಡುತ್ತಿವೆ. ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಸಹ ಹಾಜರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com