ಅಂತೆಯೇ, ಕುಲಭೂಷಣ್ ಜಾಧವ್ ಅವರ ವಿಚಾರಣೆ ಪಾರದರ್ಶಕವಾಗಿರಲಿಲ್ಲ ಎಂದೂ ಭಾರತ ಆರೋಪಿಸಿದ್ದು, ಪಾಕಿಸ್ತಾನ ರಹಸ್ಯವಾಗಿ ವಿಚಾರಣೆಯ ನಾಟಕ ಮಾಡಿದೆ ಎಂದು ಹೇಳಿದೆ. ಹೀಗಾಗಿ, ಅಂತಾರಾಷ್ಟ್ರೀಯ ನ್ಯಾಯಾಲಯದ (ಐಸಿಜೆ) ಮೊರೆ ಹೋಗಿ ಜಾಧವ್ ಗೆ ನೀಡಿದ್ದ ಮರಣದಂಡನೆ ತೀರ್ಪಿಗೆ ತಡೆ ತಂದಿದೆ. ನೆದರ್ಲೆಂಡ್ಸ್ ದೇಶದ ಹೇಗ್ ನಗರದಲ್ಲಿರುವ ಅಂತಾರಾಷ್ಟ್ರೀಯ ಕೋರ್ಟ್ ಇಂದಿನಿಂದ ಕುಲಭೂಷಣ್ ಜಾಧವ್ ಪ್ರಕರಣದ ವಿಚಾರಣೆ ನಡೆಸಲಿದೆ.