ಪುಲ್ವಾಮ ಉಗ್ರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಬಿಡುಗಡೆ ಮಾಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅಮರೀಂದರ್ ಸಿಂಗ್ ಅವರು, ಪುಲ್ವಾಮಾ ದಾಳಿಯಲ್ಲಿ ಜೈಷೆ ಉಗ್ರರ ಕೈವಾಡವಿಲ್ಲ ಎನ್ನುವ ನಿಮಗೆ ಇನ್ನೆಷ್ಟು ಪುರಾವೆಗಳು ಬೇಕು? ಹತ ಉಗ್ರರ ಮೃತ ದೇಹಗಳನ್ನು ಸಾಕ್ಷ್ಯವಾಗಿ ಕಳುಹಿಸಬೇಕೇ?,'' ಎಂದು ಇಮ್ರಾನ್ ಅವರನ್ನು ಟ್ವಿಟರ್ನಲ್ಲಿ ಕ್ಯಾಪ್ಟನ್ ಪ್ರಶ್ನಿಸಿದ್ದಾರೆ. ಉಗ್ರರ ನಿರ್ಮೂಲನೆ ವಿಚಾರದಲ್ಲಿ ಕಪಟ ನಾಟಕವಾಡುವ ಪಾಕ್ ಜತೆಗೆ 'ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು' ಎನ್ನುವ ರೀತಿಯಲ್ಲಿ ಅತ್ಯಂತ ನಿಷ್ಠುರವಾಗಿ ವ್ಯವಹರಿಸಬೇಕಾಗಿದೆ ಎಂದು ಹೇಳಿದರು.