ಈ ಬಗ್ಗೆ ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರು, 11 ರಾಜ್ಯಗಳ ಡಿಜಿಪಿಗಳು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದು, ಕಾಶ್ಮೀರಿಗಳಿಗೆ ಭದ್ರತೆ ನೀಡುವಂತೆ ಸೂಚಿಸಿದ್ದಾರೆ. ಅಲ್ಲದೆ ಆಯಾ ರಾಜ್ಯಗಳಲ್ಲಿರುವ ಕಾಶ್ಮೀರಿಗಳ ಭದ್ರತೆ ಆಯಾ ರಾಜ್ಯ ಸರ್ಕಾರದ್ದೇ ಆಗಿರುತ್ತದೆ. ಅವರ ಮೇಲೆ ಹಲ್ಲೆ ಬೆದರಿಕೆ ಮತ್ತು ಸಾಮಾಜಿಕ ಬಹಿಷ್ಕಾರದಂತಹ ಕೃತ್ಯಗಳಿಂದ ಅವರನ್ನು ರಕ್ಷಿಸುವುದು ರಾಜ್ಯ ಸರ್ಕಾರಗಳ ಹೊಣೆಯಾಗಿರುತ್ತದೆ. ಕಾಶ್ಮೀರ ಮೂಲದ ಜನರ ಮೇಲೆ ಹಲ್ಲೆ ಮಾಡುವ, ಸಾಮಾಜಿಕ ನಿರ್ಬಂಧ ಹೇರುವವರ ವಿರುದ್ಧ ಕಠಿಣ ಕ್ರಮ ಜರುಗಿಸಿ ಎಂದು ಆದೇಶ ನೀಡಿದ್ದಾರೆ.