ಉತ್ತರ ಪ್ರದೇಶ: ಕಾರ್ಪೆಟ್ ಕಾರ್ಖಾನೆಯಲ್ಲಿ ಸ್ಫೋಟ, 13 ಮಂದಿ ಸಾವು

ಉತ್ತರ ಪ್ರದೇಶದ ಭದೋಹಿ ಜಿಲ್ಲೆಯಲ್ಲಿ ಕಾರ್ಪೆಟ್ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, 10 ಮಂದಿ ಮೃತಪಟ್ಟಿರುವ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟಗೊಂಡ ಕಾರ್ಪೆಟ್ ಕಾರ್ಖಾನೆ
ಸ್ಫೋಟಗೊಂಡ ಕಾರ್ಪೆಟ್ ಕಾರ್ಖಾನೆ
ಭದೋಹಿ: ಉತ್ತರ ಪ್ರದೇಶದ ಭದೋಹಿ ಜಿಲ್ಲೆಯಲ್ಲಿ ಕಾರ್ಪೆಟ್ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, 13 ಮಂದಿ ಮೃತಪಟ್ಟಿರುವ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭದೋಹಿ ಜಿಲ್ಲೆಯ ಕಲಿಯಾರ್ ಮನ್ಸೂರಿಯ ರೊಹ್ಟಾ ಬಜಾರ್ ನಲ್ಲಿರುವ ಅಂಗಡಿಯಲ್ಲಿ ಈ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಇಡೀ ಕಟ್ಟಡ ಧ್ವಂಸವಾಗಿದೆ. ಕಟ್ಟಡದ ಅವಶೇಷಗಳಡಿ ಇನ್ನು ಹಲವರು ಸಿಲುಕಿರುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಪ್ರಸಾದ್ ಅವರು ತಿಳಿಸಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಈ ಕಾರ್ಖಾನೆಯಲ್ಲಿ ಮೊದಲು ಪಟಾಕಿಗಳನ್ನು ತಯಾರಿಸಲಾಗಿತ್ತಿತ್ತು. ಹೀಗಾಗಿ ಒಂದಷ್ಟು ಪಟಾಕಿಗಳನ್ನು ಕಟ್ಟಡ ಒಳಭಾಗದಲ್ಲಿ ಸಂಗ್ರಹಿಸಲಾಗಿತ್ತು. ಅವುಗಳಿಂದ ಈ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com