ಗೋರಖ್ ಪುರ: ಕಿಸಾನ್ ಸಮ್ಮಾನ್ ಯೋಜನೆ ದೇಶದ ರೈತರ ಹಕ್ಕು, ಈ ಹಿಂದಿನ ಸರ್ಕಾರಗಳು ರೈತರ ಉದ್ಧಾರದ ಬಗ್ಗೆ ಕೆವಲ ಮಾತನಾಡುತ್ತಿದ್ದವು, ಯೋಜನೆಗಳನ್ನು ಕಾಗದಕ್ಕೆ ಅಷ್ಟೇ ಸೀಮಿತಗೊಳ್ಳುತ್ತಿದ್ದವು. ಆದರೆ ನಮ್ಮ ಸರ್ಕಾರ ರೈತರ ಖಾತೆಗೆ ನೇರ ಹಣ ವರ್ಗಾವಣೆ ಮಾಡುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ರೈತರಿಗೆ ಅರ್ಪಿಸಿದೆ ಎಂದು ಮೋದಿ ಹೇಳಿದ್ದಾರೆ.