'ಚುನಾವಣಾ ನಾಟಕ ನಿಲ್ಲಿಸಿ' ಪ್ರಧಾನಿ ಮೋದಿ ವಿರುದ್ಧ ಪ್ರಕಾಶ್ ರೈ ಕಿಡಿ!

ಉತ್ತರ ಪ್ರದೇಶದ ಪ್ರಯಾಗ್ ನ ತ್ರಿವೇಣಿ ಸಂಗಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೌರಕಾರ್ಮಿಕರ ಪಾದ ಪೂಜೆ ಮಾಡಿರುವುದು ಚುನಾವಣಾ ಗಿಮಿಕ್ ಎಂದು ನಟ ಕಮ್ ರಾಜಕಾರಣಿ ಪ್ರಕಾಶ್ ರೈ ಹೇಳಿದ್ದಾರೆ.
ಪ್ರಧಾನಿ ಮೋದಿ-ಪ್ರಕಾಶ್ ರೈ
ಪ್ರಧಾನಿ ಮೋದಿ-ಪ್ರಕಾಶ್ ರೈ
ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ನ ತ್ರಿವೇಣಿ ಸಂಗಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೌರಕಾರ್ಮಿಕರ ಪಾದ ಪೂಜೆ ಮಾಡಿರುವುದು ಚುನಾವಣಾ ಗಿಮಿಕ್ ಎಂದು ನಟ ಕಮ್ ರಾಜಕಾರಣಿ ಪ್ರಕಾಶ್ ರೈ ಹೇಳಿದ್ದಾರೆ. 
ಪ್ರಧಾನಿ ಮೋದಿ ಅವರು ಪೌರಕಾರ್ಮಿಕರ ಪಾದ ಪೂಜೆ ಮಾಡಿರುವ ವಿಡಿಯೋವನ್ನು ಟ್ವೀಟರ್ ನಲ್ಲಿ ಪೋಸ್ಟ್ ಮಾಡಿ ಪ್ರಕಾಶ್ ರೈ 'ಪ್ರೀತಿಯ ಸುಪ್ರೀಂ ಲೀಡರ್. ನೀವು ಈ ಎಲೆಕ್ಷನ್ ಗಿಮಿಕ್ ನಿಲ್ಲಿಸಿ. ಪೌರಕಾರ್ಮಿಕರಿಗೆ ಬೇಕಾಗಿರುವುದು ಕೆಲಸದ ಭದ್ರತೆ, ತಮ್ಮ ಮಕ್ಕಳ ಭವಿಷ್ಯ ಹಾಗೂ ಸುರಕ್ಷಿತ ಕ್ರಮ ಹೊರತು ನಿಮ್ಮ ನಾಯಕ ಅಲ್ಲ ಎಂದು ಬರೆದುಕೊಂಡಿದ್ದಾರೆ. 
ಕುಂಭಮೇಳದಲ್ಲಿ ಪ್ರಧಾನಿ ಭಾಗಿಯಾಗಿದ್ದರು. ಹಣೆಗೆ ವಿಭೂತಿ ಹಚ್ಚಿಕೊಂಡು, ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 5 ಜನ ಪೌರಕಾರ್ಮಿಕರ ಪಾದಕ್ಕೆ ನೀರು ಹಾಕಿ ತೊಳೆದು, ಕರವಸ್ತ್ರದಿಂದ ಸ್ವಚ್ಛಗೊಳಿಸಿದ್ದರು. ಪಾದಪೂಜೆಯ ಬಳಿಕ ಅವರಿಗೆ ಶಾಲು ಹೊದಿಸಿ ಕೈಮುಗಿದು ಧನ್ಯವಾದ ತಿಳಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com