ಭಾರತೀಯ ವಾಯುಸೇನೆಯ ಯುದ್ಧ ವಿಮಾನಗಳು ಬರೋಬ್ಬರಿ ನಾಲ್ಕು ದಶಕಗಳ ನಂತರ ಭಾರತದ ಗಡಿಯಾಚೆ ರೆಕ್ಕೆ ಬಿಚ್ಚುವ ಅವಕಾಶ ಸಿಕ್ಕಿದೆ. ಇನ್ನು ಕಾರ್ಗಿಲ್ ನಲ್ಲಿ ಪೂರ್ಣ ಪ್ರಮಾಣದ ಯುದ್ಧ ಆರಂಭ ಆಗಿದ್ದ ಸಂದರ್ಭದಲ್ಲೂ ವಾಯುಪಡೆಗೆ ಗಡಿ ದಾಟುವ ಅವಕಾಶವನ್ನು ಭಾರತ ಸರ್ಕಾರ ನೀಡಿರಲಿಲ್ಲ. ಆದರೆ ಈಗ ಬರೋಬ್ಬರಿ 40 ವರ್ಷಗಳ ಬಳಿಕ ಎಲ್ಒಸಿ ದಾಟಿದ ನಮ್ಮ ಲೋಹದ ಹಕ್ಕಿಗಳ ಪಾಕ್ ಗಡಿಯಲ್ಲಿ ಅವಿತಿದ್ದ ಉಗ್ರರ ನೆಲೆಯನ್ನು ಧ್ವಂಸಗೊಳಿಸಿದೆ.