ವೈಮಾನಿಕ ದಾಳಿ ನಂತರ ಭಾರತವನ್ನು ಕುಖ್ಯಾತಗೊಳಿಸಲು ಪಾಕ್‌ ಯತ್ನ: ರಾಜನಾಥ್‌ ಸಿಂಗ್‌

ಭಾರತೀಯ ವಾಯು ಪಡೆ ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಉಗ್ರ ಶಿಬಿರಗಳ ಮೇಲೆ ದಾಳಿ ನಡೆಸಿದ ನಂತರ ಪಾಕಿಸ್ತಾನ ಭಾರತವನ್ನು ಕುಖ್ಯಾತಗೊಳಿಸಲು....
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್
Updated on
ಬಿಲಾಸ್ಪುರ್: ಭಾರತೀಯ ವಾಯು ಪಡೆ ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಉಗ್ರ ಶಿಬಿರಗಳ ಮೇಲೆ ದಾಳಿ ನಡೆಸಿದ ನಂತರ ಪಾಕಿಸ್ತಾನ ಭಾರತವನ್ನು ಕುಖ್ಯಾತಗೊಳಿಸಲು ಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ಬುಧವಾರ ಹೇಳಿದ್ದಾರೆ.
ಇಂದು ಛತ್ತೀಸ್ ಗಢದ ಬಿಲಾಸ್ಪುರ್ ದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್, ಭಾರತೀಯ ವಾಯುಪಡೆ ಉಗ್ರ ಶಿಬಿರಗಳನ್ನು ಬಹಳ ಎಚ್ಚರಿಕೆಯಿಂದ, ಯಾವುದೇ ನಾಗರಿಕರ ಜೀವ ಹಾನಿಗೆ ಆಸ್ಪದ ನೀಡದೆ ನಡೆಸಿದೆ. ಆದರೂ ಪಾಕ್, ಭಾರತವನ್ನು ಕುಖ್ಯಾತಗೊಳಿಸಿಲು ಯತ್ನಿಸುತ್ತಿದೆ ಎಂದರುಯ
ಪಾಕಿಸ್ತಾನಕ್ಕೆ ಭಾರತ ಅತ್ಯಂತ ಪರಿಣಾಮಕಾರಿ ಹಾಗೂ ತಕ್ಕುದಾದ ಉತ್ತರವನ್ನು ನೀಡಿದೆ ಎಂದ ಸಿಂಗ್‌, ಕಾಶ್ಮೀರ ಯಾವತ್ತೂ ಭಾರತದ ಅವಿಭಾಜ್ಯ ಅಂಗವಾಗಿರುವುದಲ್ಲದೆ ಅದನ್ನು ವಿಶ್ವದ ಯಾವುದೇ ಶಕ್ತಿ ಭಾರತದಿಂದ ಬೇರ್ಪಡಿಸಲು ಸಾಧ್ಯವಿಲ್ಲ ಎಂದರು.
ಭಾರತವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿರುವ ಪಾಕಿಸ್ತಾನಕ್ಕೆ ಎರಡು ದಿನಗಳ ಹಿಂದೆ ಅತ್ಯಂತ ಪ್ರಬಲ ಉತ್ತರ ನೀಡಿದ್ದೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com