ಭಾರತದ ವಾಯುಗಡಿ ಉಲ್ಲಂಘಿಸಿದ ಪಾಕಿಸ್ತಾನದಿಂದ ಗಡಿಯಲ್ಲಿ ಬಾಂಬ್ ದಾಳಿ ವರದಿ!

ಭಾರತೀಯ ವಾಯು ಪಡೆ ಪಾಕಿಸ್ತಾನಕ್ಕೆ ನುಗ್ಗಿ ಭಯೋತ್ಪಾದಕರ ಕ್ಯಾಂಪ್ ಗಳ ಮೇಲೆ ವೈಮಾನಿಕ ದಾಳಿ ನಡೆಸಿದ ಮರುದಿನ ಪಾಕಿಸ್ತಾನದ ಸೇನೆ ಭಾರತೀಯ ಯೋಧರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು
ಭಾರತದ ವಾಯುಗಡಿ ಉಲ್ಲಂಘಿಸಿದ ಪಾಕಿಸ್ತಾನದಿಂದ ಗಡಿಯಲ್ಲಿ ಬಾಂಬ್ ದಾಳಿ!
ಭಾರತದ ವಾಯುಗಡಿ ಉಲ್ಲಂಘಿಸಿದ ಪಾಕಿಸ್ತಾನದಿಂದ ಗಡಿಯಲ್ಲಿ ಬಾಂಬ್ ದಾಳಿ!
Updated on
ನವದೆಹಲಿ: ಭಾರತೀಯ ವಾಯು ಪಡೆ ಪಾಕಿಸ್ತಾನಕ್ಕೆ ನುಗ್ಗಿ ಭಯೋತ್ಪಾದಕರ ಕ್ಯಾಂಪ್ ಗಳ ಮೇಲೆ ವೈಮಾನಿಕ ದಾಳಿ ನಡೆಸಿದ ಮರುದಿನ ಪಾಕಿಸ್ತಾನದ ಸೇನೆ ಭಾರತೀಯ ಯೋಧರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ಯತ್ನಿಸಿದೆ. 
ಫೆ.27 ರಂದು ಬೆಳಿಗ್ಗೆ ಜಮ್ಮು-ಕಾಶ್ಮೀರದ ರಜೌರಿ ಹಾಗೂ ನೌಶೇರಾಗಳಲ್ಲಿ ವಾಯುಗಡಿಯನ್ನು  ಉಲ್ಲಂಘನೆ ಮಾಡಿದ್ದು ಬಾಂಬ್ ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ಪಾಕಿಸ್ತಾನದ ಉಗ್ರರು ಭಾರತದ ವಿಮಾನಗಳನ್ನು ಹೈಜಾಕ್ ಮಾಡುವ ಸಾಧ್ಯತೆ ಇರುವುದರಿಂದ ಜಮ್ಮು-ಕಾಶ್ಮೀರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. 
ಇನ್ನು ಶ್ರೀನಗರ, ಲೆಹ್, ಪಠಾಣ್ ಕೋಟ್ ಗಳಲ್ಲಿಯೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com