ಪಾಕಿಸ್ತಾನ ಭಾರತೀಯ ವಾಯುಗಡಿ ದಾಟಿ ವೈಮಾನಿಕ ದಾಳಿ ನಡೆಸಿರುವ ಬೆಳವಣಿಗೆ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ತಾವು ಭಾಗವಹಿಸಿದ್ದ ಕಾರ್ಯಕ್ರಮದಿಂದ ಅರ್ಧದಲ್ಲೇ ನಿರ್ಗಮಿಸಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಗೃಹ ಸಚಿವ ರಾಜನಾಥ್ ಸಿಂಗ್ ನಿವಾಸದಲ್ಲಿ ಉನ್ನತಮಟ್ಟದ ತುರ್ತು ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಪಾಕಿಸ್ತಾನದ ಕೃತ್ಯದ ಬಗ್ಗೆ ಪ್ರಧಾನಿ ಮೋದಿ ಮಾಹಿತಿ ಪಡೆದಿದ್ದು, ಎಫ್-16 ನ್ನು ಹೊಡೆದುರುಳಿಸಿರುವ ಭಾರತೀಯ ಸೇನಾಪಡೆಗಳನ್ನು ಅಭಿನಂದಿಸಿದ್ದಾರೆ.