ಒಸಾಮ ಹತ್ಯೆ ಅಮೆರಿಕಾಗೆ ಸಾಧ್ಯವಾಗುವುದಾದರೆ, ಅಂತಹ ಕಾರ್ಯಾಚರಣೆ ಭಾರತಕ್ಕೆ ಏಕೆ ಸಾಧ್ಯವಿಲ್ಲ: ಅರುಣ್ ಜೇಟ್ಲಿ
ಒಸಾಮ ಹತ್ಯೆ ಅಮೆರಿಕಾಗೆ ಸಾಧ್ಯವಾಗುವುದಾದರೆ, ಅಂತಹ ಕಾರ್ಯಾಚರಣೆ ಭಾರತಕ್ಕೆ ಏಕೆ ಸಾಧ್ಯವಿಲ್ಲ: ಅರುಣ್ ಜೇಟ್ಲಿ

ಒಸಾಮ ಹತ್ಯೆ ಅಮೆರಿಕಾಗೆ ಸಾಧ್ಯವಾಗುವುದಾದರೆ, ಅಂತಹ ಕಾರ್ಯಾಚರಣೆ ಭಾರತಕ್ಕೆ ಏಕೆ ಸಾಧ್ಯವಿಲ್ಲ: ಅರುಣ್ ಜೇಟ್ಲಿ

ಬುದ್ಧಿ ಕಲಿಯದ ಪಾಕಿಸ್ತಾನ ಭಾರತದ ಸೇನೆಯನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ಯತ್ನಿಸುತ್ತಿದೆ.
Published on
ನವದೆಹಲಿ: ಪಾಕಿಸ್ತಾನದ ಭಯೋತ್ಪಾದನೆಯನ್ನು ನಿರ್ನಾಮ ಮಾಡಲು ಪಣತೊಟ್ಟಿರುವ ಭಾರತ ವಾಯುಪಡೆ ಈಗಾಗಲೇ ಪಾಕ್ ಉಗ್ರರ ಕ್ಯಾಂಪ್ ಮೇಲೆ ಬಾಂಬ್ ಮಳೆಗರೆದು 300 ಕ್ಕೂ ಹೆಚ್ಚು ಉಗ್ರರನ್ನು ನಿರ್ನಾಮ ಮಾಡಿದೆ. ಅಷ್ಟಾದರೂ ಬುದ್ಧಿ ಕಲಿಯದ ಪಾಕಿಸ್ತಾನ ಭಾರತದ ಸೇನೆಯನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ಯತ್ನಿಸುತ್ತಿದೆ. 
ಈ ನಡುವೆಯೇ ವಿತ್ತ ಸಚಿವ ಅರುಣ್ ಜೇಟ್ಲಿ, ಸುದ್ಧಿಗೋಷ್ಠಿಯಲ್ಲಿ ಅಚ್ಚರಿಯ ಹೇಳಿಕೆ ನೀಡಿದ್ದು, ಅಮೆರಿಕಾಗೆ ತಲೆನೋವಾಗಿದ್ದ ಒಸಾಮ ಬಿನ್ ಲ್ಯಾಡನ್ ಹತ್ಯೆ ಕಾರ್ಯಾಚರಣೆಯ ಉದಾಹರಣೆ ನೀಡಿದ್ದಾರೆ. 
ಅಮೆರಿಕಾಗೆ ಪಾಕಿಸ್ತಾನದಲ್ಲಿದ್ದ ಒಸಾಮ ಬಿನ್ ಲ್ಯಾಡನ್ ನ್ನು ಪಾಕಿಸ್ತಾನಕ್ಕೇ ನುಗ್ಗಿ ಹತ್ಯೆ ಮಾಡಬಹುದಾದರೆ ಅಂತಹ ಕಾರ್ಯಾಚರಣೆ ಭಾರತಕ್ಕೆ ಏಕೆ ಸಾಧ್ಯವಿಲ್ಲ, ಯಾವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ ಎಂದಷ್ಟೇ ಹೇಳಿಕೆ ನೀಡಿ ಅಚ್ಚರಿ, ಕುತೂಹಲ ಮೂಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com