ಶತ್ರುಗಳು ಭಯೋತ್ಪಾದಕರನ್ನು ಬೆಂಬಲಿಸಿ ನಮ್ಮ ದೇಶದ ವಿರುದ್ಧ ಕಾರ್ಯಾಚರಣೆ ನಡೆಸಿದರೆ, ಅದು ನಮ್ಮ ಅಭಿವೃದ್ಧಿಯನ್ನು ತಡೆಯುವುದಕ್ಕಾಗಿ ಆಗಿರುತ್ತದೆ. ಆದರೆ ನಾವು ಒಗ್ಗಟ್ಟಿನಿಂದ ನಿಲ್ಲಬೇಕಿದೆ, ನಮ್ಮ ಯೋಧರ ಜೊತೆ ನಿಲ್ಲಬೇಕಿದೆ. ನಾವು ಬಲಿಷ್ಟವಾಗಿದ್ದೇವೆ ಎಂಬ ಸಂದೇಶ ರವಾನೆ ಮಾಡಬೇಕಿದೆ, ಎಷ್ಟೇ ಅಡೆತಡೆಗಳು ಬಂದರೂ ನಮ್ಮ ಅಭಿವೃದ್ಧಿಯನ್ನು ನಿಲ್ಲಿಸುವುದಕ್ಕೆ ಸಾಧ್ಯವಿಲ್ಲ ಎಂಬುದನ್ನು ತೋರಿಸಬೇಕಿದೆ ಎಂದು ಬೂತ್ ಮಟ್ಟದ ಕಾರ್ಯಕರ್ತರನ್ನುದ್ದೇಶಿಸಿ ಹೇಳಿದ್ದಾರೆ.