ತ್ರಿವಳಿ ತಲಾಕ್ ಕುರಿತ ಸುಗ್ರೀವಾಜ್ಞೆ ತಂದದ್ದು ಸಹ ತ್ರಿವಳಿ ತಲಾಕ್ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪಿತ್ತ ಬಳಿಕವೇ ಆಗಿದ್ದು ಸರ್ಕಾರವು ನ್ಯಾಯಾಂಗದ ತೀರ್ಪನ್ನು ಎಂದಿಗೂ ಗೌರವಿಸಿದೆ ಎಂದು ಪ್ರಧಾನಿ ಹೇಳಿದ್ದಾರೆ. 2017ರ ಸರ್ವೋಚ್ಚ ನ್ಯಾಯಾಲಯದ ತೀರ್ಪು ಉಲ್ಲೇಖಿಸಿದ ಮೋದಿ ಸುಪ್ರೀಂ ಕೋರ್ಟ್ ಮುಸ್ಲಿಮರ ತ್ರಿವಳಿ ತಲಾಖ್ ಆಚರಣೆಯನ್ನು ನಿಷೇಧಿಸಿತ್ತು, ಆ ಬಳಿಕವೇ ಸರ್ಕಾರ ಈ ಕುರಿತಂತೆ ಕ್ರಮಕ್ಕೆ ಮುಂದಾಗಿತ್ತು ಎಂದು ಅವರು ಹೇಳಿದ್ದಾರೆ. ತ್ರಿವಳಿ ತಲಾಕ್ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲಾಯಿತು, ಈ ಮಸೂದೆ ಲೋಕಸಭೆಯಿಂದ ಅಂಗೀಕರಿಸಲ್ಪಟ್ಟಿದೆ ಮತ್ತು ರಾಜ್ಯಸಭೆಯಲ್ಲಿ ಚರ್ಚೆ ನಡೆಯಬೇಕಿದೆ.