ಇದಕ್ಕೂ ಮೊದಲು ಮಹಿಳೆ ದೇಗುಲ ಪ್ರವೇಶಿಸಿ ದೇವರ ದರ್ಶನ ಪಡೆದ ಬಗ್ಗೆ ಪೊಲೀಸರೇ ಮಾಧ್ಯಮಗಳಿಗೆ ಖಚಿತಪಡಿಸಿದ್ದರು. ಆದರೆ, ಮಹಿಳೆ ಅದನ್ನು ನಿರಾಕರಿಸಿದ್ದು ಹಲವು ಅನುಮಾನಗಳು ಏಳುವಂತೆ ಮಾಡಿದೆ. ಪೊಲೀಸರ ತದ್ವಿರುದ್ಧದ ಹೇಳಿಕೆಗಳು ಶಂಕೆಗೆ ಕಾರಣವಾಗಿದೆ. ಮಹಿಳೆಯರ ಪ್ರವೇಶ ವಿಚಾರವಾಗಿ ಈಗಾಗಲೇ ಕೇರಳ ಕುದಿಯುತ್ತಿದ್ದು, ಇದೀಗ ಮತ್ತೋರ್ವ ಮಹಿಳೆಯ ದರ್ಶನ ವಿಚಾರ ಮತ್ತಷ್ಟು ಸಮಸ್ಯೆ ತಂದೊಡ್ಡಬಹುದು ಎಂಬ ಶಂಕೆ ಮೇರೆಗೆ ಪೊಲೀಸರು ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದಾರೆಯೇ ಎಂದು ಶಂಕಿಸಲಾಗುತ್ತಿದೆ.