ಶ್ರೀರಾಮ ಇಡೀ ಜಗತ್ತಿಗೇ ಸೇರಿದವನು, ಕೇವಲ ಹಿಂದೂಗಳಿಗೆ ಮಾತ್ರವಲ್ಲ: ಫಾರೂಕ್‌ ಅಬ್ದುಲ್ಲಾ

ಶ್ರೀರಾಮ ಹಿಂದೂಗಳಿಗೆ ಮಾತ್ರ ಸೇರಿದವನಲ್ಲ, ಆತ ಇಡೀ ಜಗತ್ತಿಗೇ ಸೇರಿದವನು. ಅಯೋಧ್ಯೆ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಬೇಕಾಗಿದೆ ಎಂದು ,...
ಫಾರೂಕ್‌ ಅಬ್ದುಲ್ಲಾ
ಫಾರೂಕ್‌ ಅಬ್ದುಲ್ಲಾ
Updated on
ನವದೆಹಲಿ: ಶ್ರೀರಾಮ ಹಿಂದೂಗಳಿಗೆ ಮಾತ್ರ ಸೇರಿದವನಲ್ಲ, ಆತ ಇಡೀ  ಜಗತ್ತಿಗೇ ಸೇರಿದವನು. ಅಯೋಧ್ಯೆ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಬೇಕಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಹೇಳಿದ್ದಾರೆ.
ಆಯೋಧ್ಯೆಯಲ್ಲಿನ ಭೂ ಒಡೆತನ ಯಾರಿಗೆ ಸೇರಿದ್ದು ಎಂಬ ಪ್ರಕರಣದ ವಿಚಾರಣೆ ದಿನಾಂಕವನ್ನು ಇದೇ ಜನವರಿ 10ರಂದು ಪ್ರಕಟಿಸಿ ಆದೇಶ ಹೊರಡಿಸುವುದಾಗಿ ಸುಪ್ರೀಂ ಕೋರ್ಟ್‌ ಹೇಳಿದ ಬೆನ್ನಲ್ಲೇ  ಫಾರೂಕ್ ಈ ಹೇಳಿಕೆ ನೀಡಿದ್ದಾರೆಯ
ಪ್ರಕರಣವನ್ನು ನ್ಯಾಯಾಲಯಕ್ಕೆ ತೆಗೆದುಕೊಂಡು ಹೋಗಬಾರದು. ಈ ವಿಚಾರವನ್ನು ಜನರು ಮೇಜಿನ ಚರ್ಚೆ ಮಾಡುವ ಮೂಲಕ ಬಗೆಹರಿಸಬೇಕಾಗಿದೆ.ಯಾಕೆ ಈ ವಿಚಾರವನ್ನು ಕೋರ್ಟ್‌ಗೆ ಎಳೆದೊಯ್ಯುವುದು? ಈ ವಿಚಾರ ಮಾತುಕತೆಯ ಮೂಲಕ ಬಗೆ ಹರಿಯುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದರು. ಯಾವ ದಿನ ಈ ವಿಚಾರ ಬಗೆಹರಿಯುತ್ತದೋ ಆ ದಿನ ನಾನು ಮಂದಿರಕ್ಕಾಗಿ ಇಟ್ಟಿಗೆ ಹಾಕಲು ತೆರಳುತ್ತೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com