ಶಬರಿಮಲೆಗೆ ಮಹಿಳೆಯರ ಪ್ರವೇಶ ಮಾಡಿರುವುದರ ಹಿಂದೆ ಕೇರಳದ ಕಮ್ಯೂನಿಸ್ಟ್ ಸರ್ಕಾರದ ಕೈವಾಡವಿದೆ ಎಂದು ಆರೋಪಿಸಿ ಕೇರಳ ಬಿಜೆಪಿ ಘಟಕ ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದು, ಇದಕ್ಕೆ ಕೇರಳದ ಹಿಂದೂಪರ ಸಂಘಟನೆಗಳು ಸಾಥ್ ನೀಡಿವೆ. ಏತನ್ಮಧ್ಯೆ ನಿನ್ನೆ ಬಿಜೆಪಿ ರ್ಯಾಲಿಗೆ ಕೆಲ ದುಷ್ಕರ್ಮಿಗಳು ಅಡ್ಡಿಪಡಿಸಿ ಬೈಕ್ ರ್ಯಾಲಿಯಲ್ಲಿ ಹೋಗುತ್ತಿದ್ದ ಕಾರ್ಯಕರ್ತರನ್ನು ಥಳಿಸಿದ್ದರು. ಈ ಘಟನೆ ಬಳಿಕ ಕೇರಳದಲ್ಲಿ ಹಿಂಸಾಚಾರ ಭುಗಿಲೆದಿದ್ದು, ಕೇರಳದ ಕಣ್ಣೂರಿನಲ್ಲಿರುವ ಆರ್ ಎಸ್ ಎಸ್ ಕಚೇರಿಗೆ ಬೆಂಕಿ ಹಚ್ಚಲಾಗಿದೆ. ಅಂತೆಯೇ ಕೇರಳದಲ್ಲಿರುವ ಬಿಜೆಪಿ ಸಂಸದರ ಮೇನೆ ಮೇಲೂ ದಾಳಿಯಾಗಿದ್ದು, ದುಷ್ಕರ್ಮಿಗಳ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.