ಭದ್ರತಾ ತಪಾಸಣೆಯ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದಕ್ಕೆ ಈ ನಿಯಮ ಸಹಕಾರಿಯಾಗಲಿದ್ದು, ಅತ್ಯುನ್ನತ ತಂತ್ರಜ್ಞಾನದ ಭದ್ರತಾ ಯೋಜನೆ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮತ್ತು ಕರ್ನಾಟಕದ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಈಗಾಗಲೇ ಪ್ರಾಯೋಗಿಕವಾಗಿ ಜಾರಿ ಮಾಡಲಾಗಿದೆ. ಇನ್ನೂ 202 ನಿಲ್ದಾಣಗಳಲ್ಲಿ ಈ ಯೋಜನೆಯ ಜಾರಿಗೆ ನೀಲನಕ್ಷೆ ಸಿದ್ಧವಾಗಿದೆ ಎಂದು ರೈಲ್ವೆ ಸುರಕ್ಷತಾ ಪಡೆಯ ನಿರ್ದೇಶಕ ಅರುಣ್ ಕುಮಾರ್ ಹೇಳಿದ್ದಾರೆ.