ಕಣ್ಣೂರು: ಶಬರಿಮಲೆ ದೇಗುಲಕ್ಕೆ ಇಬ್ಬರು ಮಹಿಳೆಯರು ಪ್ರವೇಶದ ನಂತರ ಕೇರಳದಲ್ಲಿ ಪ್ರತಿಭಟನೆ ಮುಂದುವರೆದಿದ್ದು, ಕಣ್ಣೂರು ಬೆಂಕಿಯುಂಡೆಯಾಗಿ ಬದಲಾಗಿದೆ. ಸಿಪಿಎಂ ಮತ್ತು ಬಿಜೆಪಿ - ಆರ್ ಎಸ್ ಎಸ್ ಕಾರ್ಯಕರ್ತರ ನಡುವೆ ದಾಳಿ ನಡೆದಿದೆ. ಸಿಪಿಎಂ ಪಕ್ಷದ ಮಾಜಿ ಜಿಲ್ಲಾ ಕಾರ್ಯದರ್ಶಿ ಪಿ ಸಾಸಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಮನೆಗಳ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ.