ಶಬರಿಮಲೆ ವಿವಾದ: ಕಣ್ಣೂರಿನಲ್ಲಿ ಮುಂದುವರಿದ ಹಿಂಸಾಚಾರ, 143 ಪ್ರಕರಣ ದಾಖಲು

ಶಬರಿಮಲೆ ದೇಗುಲಕ್ಕೆ ಇಬ್ಬರು ಮಹಿಳೆಯರು ಪ್ರವೇಶದ ನಂತರ ಕೇರಳದಲ್ಲಿ ಪ್ರತಿಭಟನೆ ಮುಂದುವರೆದಿದ್ದು, ಕಣ್ಣೂರು ಬೆಂಕಿಯುಂಡೆಯಾಗಿ ಬದಲಾಗಿದೆ.ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಮನೆಗಳ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ.
ಹಿಂಸಾಚಾರದ ಚಿತ್ರ
ಹಿಂಸಾಚಾರದ ಚಿತ್ರ
Updated on
ಕಣ್ಣೂರು: ಶಬರಿಮಲೆ ದೇಗುಲಕ್ಕೆ ಇಬ್ಬರು ಮಹಿಳೆಯರು ಪ್ರವೇಶದ ನಂತರ ಕೇರಳದಲ್ಲಿ ಪ್ರತಿಭಟನೆ ಮುಂದುವರೆದಿದ್ದು, ಕಣ್ಣೂರು ಬೆಂಕಿಯುಂಡೆಯಾಗಿ ಬದಲಾಗಿದೆ. ಸಿಪಿಎಂ ಮತ್ತು ಬಿಜೆಪಿ - ಆರ್ ಎಸ್ ಎಸ್ ಕಾರ್ಯಕರ್ತರ ನಡುವೆ ದಾಳಿ ನಡೆದಿದೆ. ಸಿಪಿಎಂ ಪಕ್ಷದ ಮಾಜಿ ಜಿಲ್ಲಾ ಕಾರ್ಯದರ್ಶಿ ಪಿ ಸಾಸಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಮನೆಗಳ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ.
ತಲಶ್ಯೇರಿ ಸೇರಿದಂತೆ ಮತ್ತಿತರ  ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.ರಜೆ ಮೇಲೆ ತೆರಳಿದ್ದ ಪೊಲೀಸರನ್ನು ಬೇಗ ಕರ್ತವ್ಯಕ್ಕೆ ಮರಳುವಂತೆ ಕಣ್ಣೂರು ಎಸ್ ಪಿ ಜಿ ಶಿವ ವಿಕ್ರಮ್  ಸೂಚಿಸಿದ್ದಾರೆ.
ಹಿಂಸಾಚಾರ ಉಂಟಾಗಿರುವ  ಸ್ಥಳಗಳಲ್ಲಿ ಶಾಂತಿ ಕಾಪಾಡುವಂತೆ  ಜಿಲ್ಲಾಧಿಕಾರಿ ಮಿರ್ ಮೊಹಮ್ಮದ್ ಆಲಿ ಹಾಗೂ ಎಸ್ಪಿ  ಶಿವ ವಿಕ್ರಮ್ ಮನವಿ ಮಾಡಿಕೊಂಡಿದ್ದಾರೆ. ಹಿಂಸಾಚಾರದ ಕಾರಣದಿಂದಾಗಿ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com