ವಿಜಯ್ ಮಲ್ಯ
ವಿಜಯ್ ಮಲ್ಯ

ಲೋಕಸಭೆ ಚುನಾವಣೆ 2019ಕ್ಕೂ ಮುನ್ನ ಮಲ್ಯ ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಸತತ ಯತ್ನ: ವರದಿ

2019 ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣೆಗೂ ಮುನ್ನವೇ ಘೋಷಿತ ದೇಶಭ್ರಷ್ಟ, ಆರ್ಥಿಕ ಅಪರಾಧಿ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಕರೆತರಲು ಕೇಂದ್ರದ ಆಡಳಿತಾರೂಢ ನರೇಂದ್ರ ಮೋದಿ ಸರ್ಕಾರ ಸತತ ಯತ್ನಗಳನ್ನು...
Published on
ನವದೆಹಲಿ: 2019 ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣೆಗೂ ಮುನ್ನವೇ ಘೋಷಿತ ದೇಶಭ್ರಷ್ಟ, ಆರ್ಥಿಕ ಅಪರಾಧಿ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಕರೆತರಲು ಕೇಂದ್ರದ ಆಡಳಿತಾರೂಢ ನರೇಂದ್ರ ಮೋದಿ ಸರ್ಕಾರ ಸತತ ಯತ್ನಗಳನ್ನು ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ. 
ಭಾರತೀಯ ಬ್ಯಾಂಕ್ ಗಳಿಗೆ ಸಾವಿರಾರು ಕೋಟಿಗಳಷ್ಟು ಪಂಗನಾಮ ಹಾಕಿರುವ ಮಲ್ಯ ಪ್ರಸ್ತುತ ಬ್ರಿಟನ್ ನಲ್ಲಿದ್ದು, ಬ್ರಿಟನ್ ನಿಂದ ಭಾರತಕ್ಕೆ ಮಲ್ಯ ಅವರನ್ನು ಗಡಿಪಾರು ಮಾಡಿಸಿಕೊಳ್ಳುವ ನಿಟ್ಟಿನಲ್ಲಿ ಮೋದಿ ಸರ್ಕಾರ ಇದೀಗ ರಾಜತಾಂತ್ರಿಕ ಮಾರ್ಗಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. 
ಬ್ಯಾಂಕ್ ಗಳಿಗೆ ಸಾವಿರಾರು ಕೋಟಿಗಳಷ್ಟು ಮೋಸ ಮಾಡಿರುವ ಮಲ್ಯ ಅವರನ್ನು ಮುಂಬೈ ವಿಶೇಷ ಪಿಎಂಎಲ್ಎ ನ್ಯಾಯಾಲಯ ಜ.5 ರಂದು ಆರ್ಥಿಕ ಅಪರಾಧಿ ಎಂದು ಘೋಷಣೆ ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com