ದಿಢೀರ್ ಹರತಾಳ ನಡೆಸುವಂತಿಲ್ಲ, 7 ದಿನ ಮುಂಚೆ ನೋಟಿಸ್ ನೀಡಬೇಕು: ಕೇರಳ ಹೈಕೋರ್ಟ್

ಪದೇಪದೆ ಹರತಾಳ, ಪ್ರತಿಭಟನೆಯಿಂದ ತತ್ತರಿಸಿ ಹೋಗಿರುವ ದೇವರ ನಾಡು ಕೇರಳ ಜನತೆಗೆ ಹೈಕೋರ್ಟ್ ಸ್ವಲ್ಪ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ತಿರುವನಂತಪುರಂ: ಪದೇಪದೆ ಹರತಾಳ, ಪ್ರತಿಭಟನೆಯಿಂದ ತತ್ತರಿಸಿ ಹೋಗಿರುವ ದೇವರ ನಾಡು ಕೇರಳ ಜನತೆಗೆ ಹೈಕೋರ್ಟ್ ಸ್ವಲ್ಪ ರಿಲೀಫ್ ನೀಡಿದ್ದು, ರಾಜ್ಯದಲ್ಲಿ ದಿಢೀರ್ ಹರತಾಳ ನಡೆಸುವುದನ್ನು ನಿಷೇಧಿಸಿ ಸೋಮವಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ದಿಢೀರ್ ಹರತಾಳ ನಿಷೇಧಿಸಬೇಕು ಎಂದು ಕೋರಿ ಕೇರಳ ವಾಣಿಜ್ಯ ಮಂಡಳಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಯಾವುದೇ ಸಂಘಟನೆಗಳು ಮತ್ತು ಪಕ್ಷಗಳು ದಿಢೀರ್ ಹರತಾಳಕ್ಕೆ ಕರೆ ನೀಡುವಂತಿಲ್ಲ. ಒಂದು ವೇಳೆ ಹರತಾಳ ನಡೆಸುವುದಾದರೆ ಕನಿಷ್ಠ ಏಳು ದಿನ ಮುಂಚಿತವಾಗಿಯೇ ನೋಟಿಸ್ ನೀಡಬೇಕು ಎಂದು ಆದೇಶಿಸಿದೆ.
ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ಮತ್ತು ಕೆಲ ಮಹಿಳೆಯರು ದೇಗುಲ ಪ್ರವೇಶಿಸಿದ ಕಾರಣಕ್ಕೆ ರಾಜ್ಯದಲ್ಲಿ ಸರಣಿ ಹರತಾಳ ನಡೆಯುತ್ತಿದ್ದು, ಇದರಿಂದಾಗಿ 2018ರಲ್ಲಿ 97 ಕೆಲಸದ ದಿನಗಳು ನಷ್ಟವಾಗಿವೆ. ಹರತಾಳದಿಂದ ಕೈಗಾರಿಕೆ ಮತ್ತು ವಾಣಿಜ್ಯ ಉದ್ಯಮ ಭಾರಿ ನಷ್ಟ ಅನುಭವಿಸಿದೆ. ಹೀಗಾಗಿ ದಿಢೀರ್ ಹರತಾಳ ನಿಷೇಧಿಸಬೇಕು ಎಂದು ವಾಣಿಜ್ಯ ಮಂಡಳಿ ಮನವಿ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com