ಮೋದಿ ಸರ್ಕಾರದ ಈ ನಿರ್ಣಯದಿಂದ ಇನ್ನು ಮುಂದಿನ ದಿನಗಳಲ್ಲಿ ಎಸ್ ಸಿ, ಎಸ್ ಟಿ ಹೊರತಾಗಿ, ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗವರಿಗೂ ಮೀಸಲಾತಿ ಸಿಗಲಿದೆ. 2019 ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮೋದಿ ಸರ್ಕಾರ ನಿರ್ಣಯ ಮಹತ್ವ ಪಡೆದುಕೊಂಡಿದ್ದು ಈ ನಡೆಯನ್ನು ಸಾಮಾನ್ಯವರ್ಗದ ಜನತೆಯ ಮತ ಗಳಿಸಲು ರೂಪಿಸಿರುವ ಮಾಸ್ಟ್ರರ್ ಸ್ಟ್ರೋಕ್ ಎಂದೇ ವಿಶ್ಲೇಷಿಸಲಾಗುತ್ತಿದೆ.