ರಾಜಸ್ಥಾನದಲ್ಲಿ ಸರ್ಕಾರ ರಚನೆ ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಜೈಪುರದಲ್ಲಿ ರೈತ ರ್ಯಾಲಿಯಲ್ಲಿ ಮಾತನಾಡಿರುವ ಅವರು, ಸರ್ಕಾರದ ಕಾರ್ಯ ವೈಖರಿಯಿಂದ ಬೇಸರಗೊಂಡಿದ್ದ ರೈತರು ಮೂರು ರಾಜ್ಯಗಳಲ್ಲಿ ತಮ್ಮ ಶಕ್ತಿಯೇನೆಂಬುದನ್ನು ಪ್ರಧಾನಿ ಮೋದಿಗೆ ತೋರಿಸಿದ್ದಾರೆ. ರಾಜಸ್ಥಾನದಲ್ಲಿ ಆಡಳಿತ ನಡೆಸುತ್ತಿದ್ದರೂ ಬಿಜೆಪಿ ತನ್ನ ಅಧಿಕಾರವನ್ನು ಕಳೆದುಕೊಂಡಿತು ಎಂದು ಹೇಳಿದ್ದಾರೆ.