ಈ ಬಗ್ಗೆ ಕರ್ನಾಟಕ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಮಹಾಸಂಸ್ಛೆಯ ಮೂಲಗಳು ಮಾಹಿತಿ ನೀಡಿದ್ದು, 2 ದಿನಗಳ ಬಂದ್ ನಿಂದಾಗಿ ಸಾರಿಗೆ, ಕೃಷಿ. ಕೈಗಾರಿಕೆ, ಮಾರುಕಟ್ಟೆ, ವ್ಯಾಪಾರ, ವಾಣಿಜ್ಯೋದ್ಯಮ ಸೇರಿದಂತೆ ಬಹುತೇಕ ಎಲ್ಲ ವಿಭಾಗಗಳೂ ನಷ್ಟ ಅನಭವಿಸಿದ್ದು, ಇದರಿಂದ ರಾಜ್ ಸರ್ಕಾರದ ಬೊಕ್ಕಸಕ್ಕೆ ಸುಮಾರು 1100 ಕೋಟಿ ರೂ ನಷ್ಟವಾಗಿದೆ ಎಂದು ತಿಳಿದುಬಂದಿದೆ.