ಜಿಂದ್ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಂದೀಪ್ ಸುರ್ಜೇವಾಲ ಕಣಕ್ಕೆ

ಹರಿಯಾಣದ ಜಿಂದ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಬುಧವಾರ ತನ್ನ...
ರಂದೀಪ್ ಸುರ್ಜೇವಾಲ
ರಂದೀಪ್ ಸುರ್ಜೇವಾಲ
Updated on
ನವದೆಹಲಿ: ಹರಿಯಾಣದ ಜಿಂದ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಬುಧವಾರ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು, ಕಾಂಗ್ರೆಸ್ ಮುಖ್ಯ ವಕ್ತಾರ ರಂದೀಪ್ ಸುರ್ಜೇವಾಲ ಅವರು ಸ್ಪರ್ಧಿಸಲಿದ್ದಾರೆ.
ಚುನಾವಣಾ ಆಯೋಗ ಡಿಸೆಂಬರ್ 31ರಂದು ಜಿಂದ್ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಿಸಿದ್ದು, ಜನವರಿ 28ರಂದು ಮತದಾನ ನಡೆಯಲಿದೆ. ಜನವರಿ 31ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಜನವರಿ 3ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜನವರಿ 10 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ. ಹೀಗಾಗಿ ಇಂದು ಸುರ್ಜೇವಾಲ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ಬಿಜೆಪಿ ಅಭ್ಯರ್ಥಿಯಾಗಿ ಕೃಷ್ಣನ್ ಮಿದ್ಧ ಅವರು ರಂದೀಪ್ ಸುರ್ಜೇವಾಲ ವಿರುದ್ಧ ಕಣಕ್ಕಿಳಿಯಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com