ಆಂಧ್ರ, ಪಶ್ಚಿಮ ಬಂಗಾಳ ನಂತರ ಛತ್ತೀಸ್ ಗಢ ರಾಜ್ಯದಿಂದ ಸಿಬಿಐಗೆ ನೀಡಿದ್ದ ತನಿಖೆ ಒಪ್ಪಿಗೆ ಹಿಂಪಡೆತ

ರಾಜ್ಯದಲ್ಲಿನ ಪ್ರಕರಣಗಳ ತನಿಖೆಗೆ ಸಿಬಿಐಗೆ ನೀಡಲಾಗಿದ್ದ ಸಾಮಾನ್ಯ ಒಪ್ಪಿಗೆಯನ್ನು ಹಿಂತೆಗೆದುಕೊಳ್ಳಲು ...
ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಗ್ಹೆಲ್
ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಗ್ಹೆಲ್
Updated on

ರಾಜ್ಪುರ್: ರಾಜ್ಯದಲ್ಲಿನ ಪ್ರಕರಣಗಳ ತನಿಖೆಗೆ ಸಿಬಿಐಗೆ ನೀಡಲಾಗಿದ್ದ ಸಾಮಾನ್ಯ ಒಪ್ಪಿಗೆಯನ್ನು ಹಿಂತೆಗೆದುಕೊಳ್ಳಲು ಇದೀಗ ಕಾಂಗ್ರೆಸ್ ನೇತೃತ್ವದ ಛತ್ತೀಸ್ ಗಢ ಸರ್ಕಾರ ಕೂಡ ನಿರ್ಧರಿಸಿದೆ. ಇದಕ್ಕೂ ಮುನ್ನ ಪಶ್ಚಿಮ ಬಂಗಾಳ ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ಈ ನಿರ್ಧಾರ ಕೈಗೊಂಡು ಒಪ್ಪಿಗೆಯನ್ನು ಹಿಂತೆಗೆದುಕೊಂಡಿದ್ದವು.

ಸಿಬಿಐ ಮುಖ್ಯಸ್ಥರಾಗಿ ಅಲೋಕ್ ವರ್ಮಾ ಅವರನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಮಿತಿ ವಜಾಗೊಳಿಸಿ ಅಗ್ನಿಶಾಮಕ, ನಾಗರಿಕ ರಕ್ಷಣೆ ಮತ್ತು ಗೃಹ ಕಾರ್ಯಪಡೆ ಇಲಾಖೆಯ ಮಹಾ ನಿರ್ದೇಶಕರಾಗಿ ನಿನ್ನೆ ನೇಮಿಸಿದ ನಂತರ ಛತ್ತೀಸ್ ಗಢ ಸರ್ಕಾರ ಈ ಕ್ರಮ ಕೈಗೊಂಡಿದೆ. ಅಲೋಕ್ ವರ್ಮಾ ವಿರುದ್ಧ ಕೇಂದ್ರ ಜಾಗೃತ ಆಯೋಗ ತನಿಖೆ ನಡೆಸಿ ಭ್ರಷ್ಟಾಚಾರದಲ್ಲಿ ಆರೋಪಿಯನ್ನಾಗಿ ವರದಿ ನೀಡಿದೆ.

ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಗ್ಹೆಲ್ ಈ ಕುರಿತು ಕೇಂದ್ರ ಗೃಹ ಸಚಿವಾಲಯ ಹಾಗೂ ಆಂತರಿಕ ಸಚಿವಾಲಯಕ್ಕೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಯಾವುದೇ ಹೊಸ ಕೇಸುಗಳನ್ನು ದಾಖಲಿಸದಂತೆ ನಿರ್ದೇಶಿಸಬೇಕೆಂದು ಕೋರಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಕಾರ್ಯಾಲಯ ಅಧಿಕೃತ ಪ್ರಕಟಣೆ ಹೊರಡಿಸಿದೆ.

ಸರ್ಕಾರದ ಈ ನಿರ್ಧಾರದಿಂದಾಗಿ ಇನ್ನು ಮುಂದೆ ಸಿಬಿಐ, ರಾಜ್ಯದಲ್ಲಿ ತನಿಖೆ ಮತ್ತು ದಾಳಿ ನಡೆಸುವುದಿದ್ದರೆ ಮೊದಲು ರಾಜ್ಯ ಸರ್ಕಾರದ ಅನುಮತಿ ಪಡೆಯಬೇಕು. 2001ರಲ್ಲಿ ಛತ್ತೀಸ್ ಗಢ ಸರ್ಕಾರ ಸಿಬಿಐ ದಾಳಿ ಮತ್ತು ತನಿಖೆಗೆ ಸಾಮಾನ್ಯ ಒಪ್ಪಿಗೆ ನೀಡಿತ್ತು.

ಪಶ್ಚಿಮ ಬಂಗಾಳ ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ಕಳೆದ ವರ್ಷ ಸಿಬಿಐಗೆ ನೀಡಿದ್ದ ಒಪ್ಪಿಗೆಯನ್ನು ಹಿಂಪಡೆದಿದ್ದವು. ಒಪ್ಪಿಗೆ ಹಿಂಪಡೆಯುವಿಕೆಯಿಂದ ಈಗಾಗಲೇ ಮಾಡುತ್ತಿರುವ ತನಿಖೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು  ಆಂತರಿಕ ಸಚಿವಾಲಯ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com