ದುಬೈ ಪ್ರವಾಸದಲ್ಲಿರುವ ರಾಹುಲ್ ಗಾಂಧಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜವಾದಿ ಪಕ್ಷಗಳ ಮೈತ್ರಿ ಕುರಿತಂತೆ ಮಾತನಾಡಿದರು. ಈ ವೇಳೆ ಅಖಿಲೇಶ್ ಮತ್ತು ಮಾಯಾವತಿ ಅವರನ್ನು ಉದ್ದೇಶಿಸಿ ಮಾತನಾಡಿದ ಅವರು, ಎಸ್ ಪಿ ಮತ್ತು ಬಿಎಸ್ ಪಿ ಪಕ್ಷಗಳ ಮೈತ್ರಿಯಿಂದ ನನಗೆ ಖಂಡಿತಾ ಬೇಸರವಾಗಿಲ್ಲ. ಬದಲಿಗೆ ಹೆಚ್ಚು ಖುಷಿಯಾಗಿದೆ. ಅಖಿಲೇಶ್ ಯಾದವ್ ಮತ್ತು ಮಾಯಾವತಿ ಅವರ ಬಗ್ಗೆ ತಮಗೆ ಅಪಾರ ಗೌರವವಿದ್ದು, ತಮಗೆ ಸರಿ ಎನಿಸಿದ್ದನ್ನು ಮಾಡುವ ಹಕ್ಕು ಅವರಿಗಿದೆ ಎಂದು ಹೇಳಿದ್ದಾರೆ.