ಹಸುಗಳ ಹೆಸರಿನಲ್ಲಿ ಮತ ಕೇಳುವವರು ಅವುಗಳಿಗೆ ಮೇವನ್ನು ನೀಡಬೇಕು: ಅರವಿಂದ್ ಕೇಜ್ರಿವಾಲ್

ಗೋವುಗಳ ಹೆಸರಿನಲ್ಲಿ ಮತ ಕೇಳುವವರು ಅವುಗಳಿಗೆ ಮೇವನ್ನು ನೀಡಬೇಕು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
ನವದೆಹಲಿ: ಗೋವುಗಳ ಹೆಸರಿನಲ್ಲಿ ಮತ ಕೇಳುವವರು ಅವುಗಳಿಗೆ  ಮೇವನ್ನು ನೀಡಬೇಕು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಬವಣಾಗೆ ಭೇಟಿ ನೀಡಿದ್ದ ಅರವಿಂದ್ ಕೇಜ್ರಿವಾಲ್ ಅಲ್ಲಿನ ಗೋಶಾಲೆಗೆ ಭೇಟಿ ನೀಡಿದ್ದರು, ಕಳೆದ 2 ವರ್ಷಗಳಿಂದ ಗೋಶಾಲೆಗೆ ಯಾವುದೇ ಅನುದಾನ ನೀಡಿಲ್ಲ ಎಂದು ಹೇಳಿದ್ದಾರೆ.
ದೆಹಲಿ ಸಚಿವ ಗೋಪಾಲ್ ರೈ ಜೊತೆ ಶ್ರೀ ಕೃಷ್ಣ ಗೋಶಾಲೆ ಗೆ  ಅರವಿಂದ್ ಕೇಜ್ರಿವಾಲ್ ಭೇಟಿ ನೀಡಿದ್ದರು,  ದೆಹಲಿ ಸರ್ಕಾರ ಮತ್ತು ಮುನಿಸಿಪಲ್ ಕಾರ್ಪೋರೇಷನ್ ನೀಡುತ್ತಿರುವ ಅನುದಾನದಲ್ಲಿ ಈ ಗೋಶಾಲೆ ನಡೆಸಲಾಗುತ್ತಿದೆ, ಈ ವೇಳೆ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಆಮ್ ಆದ್ಮಿ ಪಕ್ಷ ಎಂದಿಗೂ ಹಸುಗಳ ಹೆಸರಿನಲ್ಲಿ ಮತ ಕೇಳುವುದಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಆಡಳಿತವಿರುವ ದೆಹಲಿಯ ಮುನಿಸಿಪಲ್ ಕಾರ್ಪೋರೇಷನ್ ನಲ್ಲಿ ಕಳೆದ 2 ವರ್ಷಗಳಿಂದ ಯಾವುದೇ ಹಣ ಬಿಡುಗಡೆಯಾಗುತ್ತಿಲ್ಲ ಹೀಗಾಗಿ ಸಮಸ್ಯೆಗಳು ಎದುರಾಗುತ್ತಿವೆ ಎಂದು ಹೇಳಿದ್ದಾರೆ.
ಮುಂದಿನ ವಾರ ಹರ್ಯಾಣದ ಗೋಶಾಲೆಗಳಿಗೆ ಭೇಟಿ ನೀಡುವುದಾಗಿ ಕೇಜ್ರಿವಾಲ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com