ಅರವಿಂದ್ ಕೇಜ್ರಿವಾಲ್ ಪುತ್ರಿ ಅಪಹರಣಕ್ಕೆ ಬೆದರಿಕೆ ಪತ್ರ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪುತ್ರಿಯನ್ನು ಅಪಹರಿಸುವುದಾಗಿ ಬೆದರಿಕೆ ಪತ್ರ ಅಪರಿಚಿತರಿಂದ ಕೇಜ್ರಿವಾಲ್ ಕಚೇರಿಗೆ ಬಂದಿರುವ ಇ- ಮೇಲ್ ನಲ್ಲಿ ಅವರ ಪುತ್ರಿಯನ್ನು ಅಪಹರಿಸುವುದಾಗಿ ಬೆದರಿಕೆ ಹಾಕಲಾಗಿದೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪುತ್ರಿಯನ್ನು ಅಪಹರಿಸುವುದಾಗಿ ಬೆದರಿಕೆ ಪತ್ರ ಅಪರಿಚಿತರಿಂದ  ಕೇಜ್ರಿವಾಲ್ ಕಚೇರಿಗೆ ಬಂದಿರುವ ಇ- ಮೇಲ್ ನಲ್ಲಿ  ಅವರ ಪುತ್ರಿಯನ್ನು ಅಪಹರಿಸುವುದಾಗಿ ಬೆದರಿಕೆ ಹಾಕಲಾಗಿದೆ.

ಜನವರಿ 9 ರಂದು ಬಂದಿರುವ ಬೆದರಿಕೆ ಇ- ಮೇಲ್ ನನ್ನು  ದೆಹಲಿಯ ಪೊಲೀಸ್ ಆಯುಕ್ತ ಅಮೂಲ್ಯ ಪಾಟ್ನಯಕ್ ಅವರಿಗೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆದರಿಕೆ  ಇ- ಬಂದಿರುವುದನ್ನು ದೆಹಲಿ ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದು, ಅದನ್ನು ಸೈಬರ್ ವಿಭಾಗದ ವಿಶೇಷ ಘಟಕ್ಕೆ ವರ್ಗಾಯಿಸಲಾಗಿದೆ. ಯಾವ ಇ- ಮೇಲ್ ಖಾತೆಯಿಂದ ಈ ಕರೆ ಬಂದಿದೆ ಎಂಬುದನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಉತ್ತರ ಜಿಲ್ಲೆಯ ಪೊಲೀಸರಿಂದ ಕೇಜ್ರಿವಾಲ್ ಮಗಳಿಗೆ ಭದ್ರತೆ ಒದಗಿಸಲಾಗಿದೆ.

ಮೂರು ದಿನಗಳ ಹಿಂದೆಯೇ  ದೆಹಲಿ ಸರ್ಕಾರ ಬೆದರಿಕೆಯ ಇ- ಮೇಲ್ ನ್ನು ಪೊಲೀಸ್ ಆಯುಕ್ತರಿಗೆ ವರ್ಗಾಯಿಸಿರುವುದಾಗಿ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರಿಂದ ಈವರೆಗೂ ಯಾವುದೇ ಮಾಹಿತಿ ತಿಳಿದುಬಂದಿಲ್ಲ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com