ಲೋಕಸಭೆ ಚುನಾವಣೆಯಲ್ಲಿ ಎಸ್ಪಿ-ಬಿಎಸ್ಪಿ ಅಭ್ಯರ್ಥಿಗಳ ಗೆಲುವು ನನ್ನ ಜನ್ಮದಿನಕ್ಕೆ ನಿಮ್ಮ ಉಡುಗೊರೆಯಾಗಿರಲಿ: ಮಾಯಾವತಿ

ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿಗೆ ಇಂದು 63ನೇ ಜನ್ಮ ದಿನದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಪಕ್ಷ ಹಾಗೂ ಸಮಾಜವಾದಿ ಪಕ್ಷದ ಕಾರ್ಯಕರ್ತರು ತಮ್ಮ ಈ ಹಿಂದಿನ ದ್ವೇಷವನ್ನು .....
ಮಾಯಾವತಿ
ಮಾಯಾವತಿ
Updated on
ಲಖನೌ: ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿಗೆ ಇಂದು  63ನೇ ಜನ್ಮ ದಿನದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಪಕ್ಷ ಹಾಗೂ ಸಮಾಜವಾದಿ ಪಕ್ಷದ ಕಾರ್ಯಕರ್ತರು ತಮ್ಮ ಈ ಹಿಂದಿನ ದ್ವೇಷವನ್ನು ಮರೆತು ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ಕೆಲಸ ಮಾಡಬೇಕು ಎಂದು ಕರೆ ನಿಡಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಉತ್ತರ ಪ್ತದೇಶದಲ್ಲಿ ಸಮಾಜವಾದಿ ಪಕ್ಷ (ಎಸ್ಪಿ) ಹಾಗೂ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಮೈತ್ರಿ ಮಾಡಿಕೊಂಡಿದ್ದು 23 ವರ್ಷಗಳ ಹಳೆಯ ರಾಜಕೀಯ ವೈಷಮ್ಯ ಬದಿಗೊತ್ತಿ ಒಂದಾಗಿದೆ.
ಭಿನ್ನಾಭಿಪ್ರಾಯಗಳನ್ನು ಮರೆತು ಎಸ್ಪಿ ಮತ್ತು ಬಿಎಸ್ಪಿಯ ಎಲ್ಲಾ ಕಾರ್ಯಕರ್ತರು ತಮ್ಮ ಅಭ್ಯರ್ಥಿಗಳ ಜಯವನ್ನು ಖಾತ್ರಿಪಡಿಸಿಕೊಳ್ಳಬೇಕಿದೆ.ಇದು ನೀವು ನನ್ನ ಹುಟ್ಟುಹಬ್ಬಕ್ಕೆ ನನಗೆ ನೀಡುವ ಅತ್ಯುತ್ತಮ ಉಡುಗೊರೆ.ಎಂದು ಮಾಯಾವತಿಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ. 
ಉತ್ತರ ಪ್ರದೇಶದಲ್ಲಿ ಮುಂಬರುವ ಲೋಕಸಭಾ ಚುನಾವಣೆಗಾಗಿ ಎಸ್ಪಿ ಮತ್ತು ಬಿಎಸ್ಪಿ 50-50 ಸ್ಥಾನ ಹಂಚಿಕೆ ಒಪ್ಪಂದ ಮಾಡಿಕೊಂಡಿವೆ.ಎಂಬತ್ತು ಲೋಕಸಭಾ ಸ್ಥಾನಗಳಿರುವ ಉತ್ತರ ಪ್ರದೇಶದಲ್ಲಿ ಎರಡೂ ಪಕ್ಷಗಳು ತಲಾ 38 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಅದಾಗ್ಯೂ ಈ ಮೈತ್ರಿ ಪಕ್ಷಗಳು ಪ್ರಮುಖ ಕ್ಷೇತ್ರಗಳಾದ ಅಮೇಥಿ ಹಾಗೂ ರಾಯ್ ಬರೇಲಿಯಲ್ಲಿ ಸ್ಪರ್ಧಿಸುವುದಿಲ್ಲ, ಎಂದು ಹೇಳಲಾಗಿದೆ. ಈ ಎರಡೂ ಕ್ಷೇತ್ರಗಳು ಕಾಂಗ್ರೆಸ್ ನ ಅಗ್ರಗಣ್ಯರಾದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ಸ್ವಕ್ಷೇತ್ರಗಳಾಗಿದೆ.
ಇನ್ನು ಉತ್ತರ ಪ್ರದೇಶದಲ್ಲಿನ ಈ ಘಟಬಂಧನ್ ಕಾಂಗ್ರೆಸ್ ಪಕ್ಶ್ಘವನ್ನು ಹೊರಗಿಟ್ಟಿದ್ದು ಕಾಂಗ್ರೆಸ್ ತಾನು ಎಲ್ಲಾ ಎಂಬತ್ತು ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com