ಚಂಡಿಗಡ: ಪಂಜಾಬಿನ ಆಮ್ ಆದ್ಮಿ ಪಕ್ಷದ ನಾಯಕ ಬಲ್ದೇವ್ ಸಿಂಗ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಮೂಲಕ ನಾಯಕರಿಗೆ ಭಾರೀ ಆಘಾತ ನೀಡಿದ್ದಾರೆ.
ಪಂಜಾಬಿನ ಜೈಟೋ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಬಲ್ದೇವ್ ಸಿಂಗ್ ಅವರು, ಪಕ್ಷದ ಇಬ್ಬಂದಿ ನೀತಿಯಿಂದ ಬೇಸತ್ತು ರಾಜೀನಾಮೆ ನೀಡಿರುವುದಾಗಿ ಹೇಳಿಕೊಂಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕೇಜ್ರಿವಾಲ್ ಸ್ಪರ್ಧಿಸುವುದು ಅನುಮಾನ ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ರಾಜೀನಾಮೆ ನೀಡುತ್ತಿರುವುದಾಗಿ ಈ ಮೂಲಕ ತಿಳಿಸಲು ವಿಷಾದಿಸುತ್ತೇನೆ. ಆದರೆ ಪಕ್ಷ ತನ್ನ ಮೂಲ ತತ್ವ ಮತ್ತು ಆದರ್ಶವನ್ನು ಮರೆತಿದೆ.
ಪಕ್ಷದಲ್ಲಿ ಸರ್ವಾಧಿಕಾರಿ ಮನೋಭಾವ ತಲೆದೂರಿದೆ. ನನಗೆ ರಾಜೀನಾಮೆ ನೀಡದೆ ಬೇರೆ ದಾರಿ ಇರಲಿಲ್ಲ ಎಂದು ಸಿಂಗ್ ಹೇಳಿದ್ದಾರೆ.
ಇದೇ ತಿಂಗಳು ಅಂದರೆ ಜನವರಿ 06 ರಂದು ಆಮ್ ಆದ್ಮಿ ಪಕ್ಷದ ಶಾಸಕ ಸುಖ್ಪಾಲ್ ಖೈರಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.