ಒಡಿಶಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ನಬಾ ಕಿಶೋರ್ ರಾಜೀನಾಮೆ, ಬಿಜೆಡಿ ಸೇರ್ಪಡೆ

ಲೋಕಸಭೆ ಚುನಾವಣೆಯೊಂದಿಗೆ ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಒಡಿಶಾದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಗೆ ಭಾರಿ...
ನಬಾ ಕಿಶೋರ್ ದಾಸ್
ನಬಾ ಕಿಶೋರ್ ದಾಸ್
ಭುವನೇಶ್ವರ್:ಲೋಕಸಭೆ ಚುನಾವಣೆಯೊಂದಿಗೆ ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಒಡಿಶಾದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಗೆ ಭಾರಿ  ಹಿನ್ನಡೆಯಾಗಿದ್ದು, ಒಡಿಶಾ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿದ್ದ ನಬಾ ಕಿಶೋರ್ ದಾಸ್ ಅವರು ಬುಧವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ದಿಢೀರ ರಾಜೀನಾಮೆ ನೀಡಿದ್ದಾರೆ.
ಜನವರಿ 25ರಂದು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಬರೆದಿರುವ ದಾಸ್ ಅವರು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿಲ್ಲ. 
ನನ್ನ ಕ್ಷೇತ್ರದ ಜನರು ಹಾಗೂ ಮತದಾರರು ತಾನು ಬಿಜೆಡಿಯಿಂದ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಬಯಸುತ್ತಿದ್ದಾರೆ. ಹೀಗಾಗಿ, ಕಾಂಗ್ರೆಸ್‌ಗೆ ಹಾಗೂ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ದಾಸ್ ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ನನ್ನ ಈ ಕ್ರಮಕ್ಕೆ ಕ್ಷಮೆಯಿರಲಿ. ಆದರೆ, ಅಭಿವೃದ್ಧಿ ಮೊದಲು ಎಂಬ ಗುರಿ ಹೊಂದಿರುವುದರಿಂದ ಬಿಜೆಡಿಗೆ ಸೇರಬೇಕಿದ್ದು, ಮುಖ್ಯಮಂತ್ರಿ ನವೀನ್ ಪಟ್ನಾಯಕ್‌ ಜೊತೆಗೂ ಕೈಜೋಡಿಸಬೇಕಿದೆ ಎಂದು ಕಾಂಗ್ರೆಸ್ ಶಾಸಕ ನಬಾ ಕಿಶೋರ್ ದಾಸ್ ರಾಹುಲ್‌ ಗಾಂಧಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com