ಭಾರತ ಸ್ವಾತಂತ್ರ ಗಳಿಸುವುದಕ್ಕೆ ಮುನ್ನ ನಾಗಿರೆಡ್ಡಿ ಹಾಗೂ ಚಕ್ರಪಾಣಿ ಎಂಬ ಇಬ್ಬರು ತೆಲುಗು ಹಾಗೂ ತಮಿಳು ಭಾಷೆಯಲ್ಲಿ "ಚಂದಮಾಮ" ಪತ್ರಿಕೆ ಪ್ರಕಟಣೆಗೆ ಪ್ರಾರಂಭಿಸಿದ್ದರು.೯೦ರ ದಶಕದಲ್ಲಿ ದೇಶಾದ್ಯಂತ ಮನೆಮಾತಾಗಿದ್ದ ಪತ್ರಿಕೆ ಸಿಂಧಿ, ಸಂಸ್ಕೃತ ಸೇರಿ ದೇಶದ ೧೩ ಭಾಷೆಗಳಲ್ಲಿ ಪ್ರಕಟವಾಗುತ್ತಿತ್ತು. ೨೦೦೭ರಲ್ಲಿ "ಚ<ದಮಾಮ" ಪತ್ರಿಕೆಯ ಶೇ. ೯೪ರಷ್ಟು ಶೇರುಗಳನ್ನು ರು.೧೦.೨ ಕೋಟಿ ನೀಡಿ ಜಿಯೋಡೆಸಿಕ್ ಲಿ. ಸಂಸ್ಥೆ ಖರೀದಿಸಿದೆ.ಆ ವೇಳೆ ಪತ್ರಿಕೆ ಪ್ರಸರಣಾ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದು ಜಾಹೀರಾತು ಆದಾಯ ಸಹ ಕುಸಿದಿತ್ತು. ಇದಾಗಿ ಜಿಯೋಡೆಸಿಕ್ ;ಲಿ ೨೦೧೪ರ ವೇಳೆಗೆ ದಿವಾಳಿತನ ಘೋಷಣೆ ಮಾಡಿ ಬಾಗಿಲು ಮುಚ್ಚಿತ್ತು. ಇದೀಗ ತೆರಿಗೆ ವಂಚನೆ ಪ್ರಕರಣ ಸೇರಿ ವಿವಿಧ ಪ್ರಕರಣಗಳಡಿ ಸಂಸ್ಥೆಯ ಮುಖ್ಯಸ್ಥರು ಆರೋಪಿಯಾಗಿದ್ದು ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.