ಅಕ್ರಮ ಗಣಿಗಾರಿಕೆ ನಡೆಸಲು ಭೂಮಿಯ ಆಳಕ್ಕೆ ಇಳಿದಿದ್ದ 15 ಕಾರ್ಮಿಕರು ನದಿ ಸಮೀಪದಲ್ಲೆ ಭೂಮಿ ಅಗೆದಾಗ ನದಿಯ ನೀರು ಇವರಿದ್ದ ಪ್ರದೇಶವನ್ನು ಆವರಿಸಿಕೊಂಡಿದೆ. ಗಣಿಗಾರಿಕೆ ನಡೆಯುತ್ತಿದ್ದ ಪ್ರದೇಶದಲ್ಲಿ ಸುಮಾರು 350 ಅಡಿ ಕೆಳಗಿನಿಂದ ಕೋಟ್ಯಂತರ ಲೀಟರ್ ನಷ್ಟು ನೀರನ್ನು ಹೊರ ತೆಗೆಯಲಾಗಿದೆಯಾದರೂ ಯಾವುದೇ ಬದಲಾವಣೆಯಾಗಿಲ್ಲ ಎಂದು ರಕ್ಷಣಾ ಸಿಬ್ಬಂದಿಗಳು ಹೇಳಿದ್ದಾರೆ.