ಡಾ. ಶಿವಕುಮಾರ ಸ್ವಾಮೀಜಿ ಬೇಗ ಗುಣ ಮುಖರಾಗಲಿ: ಪ್ರಧಾನಿ ಮೋದಿ ಟ್ವೀಟ್

ಸಿದ್ದಗಂಗಾ ಮಠಾಧೀಶ ಡಾ. ಶಿವಕುಮಾರ ಸ್ವಾಮೀಜಿ ಬೇಗ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ.
ಶಿವಕುಮಾರ ಶ್ರೀಗಳು, ಪ್ರಧಾನಿ ಮೋದಿ
ಶಿವಕುಮಾರ ಶ್ರೀಗಳು, ಪ್ರಧಾನಿ ಮೋದಿ
ತುಮಕೂರು: ಸಿದ್ದಗಂಗಾ ಮಠಾಧೀಶ ಡಾ. ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ.  ಬೆಳಗ್ಗೆ 5 ಗಂಟೆ ಸಮಯದಲ್ಲಿ ಸ್ವಾಮೀಜಿಗಳ ರಕ್ತ, ರಕ್ತದೊತ್ತಡ ಮತ್ತಿತರ ಪರೀಕ್ಷೆ ನಡೆಸಲಾಗಿದ್ದು,  ವೆಂಟಿಲೇಷನ್ ಮೂಲಕ ಶ್ರೀಗಳಿಗೆ ಉಸಿರಾಟ ವ್ಯವಸ್ಥೆ ಮಾಡಲಾಗಿದೆ.
ನಮ್ಮ ಊಹೆಗೂ ನಿಲುಕದ ರೀತಿಯಲ್ಲಿ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಬಿಜಿಎಸ್ ಹಾಗೂ ಸಿದ್ದಗಂಗಾ ಮಠದ ಆಸ್ಪತ್ರೆಯಲ್ಲಿನ ವೈದ್ಯರ ತಂಡ ವರದಿಯಲ್ಲಿ ತಿಳಿಸಿದೆ.
ಈ ಮಧ್ಯೆ ಸ್ವಾಮೀಜಿಗಳು ಬೇಗ ಚೇತರಿಸಿಕೊಳ್ಳಲಿ ಎಂದು ಕೋರಿ ವಿವಿಧೆಡೆ ವಿಶೇಷ ಪ್ರಾರ್ಥನೆಗಳು ನಡೆಯುತ್ತಿವೆ.  ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ  ಟ್ವೀಟ್ ಮಾಡಿದ್ದು, ಶ್ರೀಗಳು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಶಿವಕುಮಾರ್ ಸ್ವಾಮೀಜಿಗಳದ್ದು ಅಮೋಘ ವ್ಯಕ್ತಿತ್ವ. ಅವರ ಮಹೋನ್ನತ ಸೇವೆ ಕೋಟ್ಯಾಂತರ ಜನರ ಜೀವನದ ಮೇಲೆ ಸಕಾರಾತ್ಮಕ ಪ್ರಭಾವ ಬೀರಿದೆ. ಶ್ರೀಗಳು ಬೇಗ ಗುಣ ಮುಖರಾಗಲಿ ಎಂದು  ಇಡೀ ರಾಷ್ಟ್ರ ಪ್ರಾರ್ಥಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com