ಸಾಮಾನ್ಯವಾಗಿ ನಾಗಾ ಸಾಧುಗಳು ಯಾವುದೇ ವಸ್ತ್ರ ಧರಿಸುವುದಿಲ್ಲ, ಕೇವಲ ಭಸ್ಮ ಧಾರಣೆ ಮಾಡಿಕೊಳ್ಳುತ್ತಾರೆ. ಆದರೆ ಕುಂಭಮೇಳಕ್ಕೆ ಆಗಮಿಸಿದ್ದ ನಾಗಾಸಾಧು ಒಬ್ಬರು ವಸ್ತ್ರ ಧರಿಸಿ ನಡೆಯುತ್ತಿದ್ದರು. ಈ ವೇಳೆ ಎದುರಾದ ಪತ್ರಕರ್ತೆಯೊಬ್ಬರು ನಾಗಾಸಾಧುವನ್ನು ಸಂದರ್ಶಿಸಲು ಯತ್ನಿಸಿದರು. ಆದರೆ ಅದೇ ಸಮಯದಲ್ಲಿ ಎಡವಟ್ಟೊಂದನ್ನು ಮಾಡಿಕೊಂಡಿದ್ದು, ನಾಗಾಸಾಧುವನ್ನು ಬಟ್ಟೆ ಧರಿಸಿಕೊಂಡಿರುವುದರ ಬಗ್ಗೆ ಪ್ರಶ್ನಿಸಿದ್ದಾರೆ.