ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸಮಾವೇಶ: ಅನಾರೋಗ್ಯಕ್ಕೀಡಾದ ಅಮಿತ್ ಶಾ ಬದಲು ಸ್ಮೃತಿ ಇರಾನಿ ನೇತೃತ್ವ

ಇತ್ತೀಚೆಗಷ್ಟೇ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಅಮಿತ್ ಶಾ ಜ.22 ರಂದು ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಬಿಜೆಪಿ ಸಮಾವೇಶ ಮುಕ್ತಾಯಗೊಳಿಸಿ ದೆಹಲಿಗೆ ಮರಳಿದ್ದಾರೆ.
ಅಮಿತ್ ಶಾ
ಅಮಿತ್ ಶಾ
ಕೋಲ್ಕತ್ತಾ: ಇತ್ತೀಚೆಗಷ್ಟೇ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಅಮಿತ್ ಶಾ ಜ.22 ರಂದು ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಬಿಜೆಪಿ ಸಮಾವೇಶ ಮುಕ್ತಾಯಗೊಳಿಸಿ ದೆಹಲಿಗೆ ಮರಳಿದ್ದಾರೆ. 
ಈ ಹಿಂದೆ ನಿಗದಿಯಾಗಿದ್ದ ವೇಳಾಪಟ್ಟಿಯಂತೆ ಅಮಿತ್ ಶಾ ಬಿರ್ಭಮ್,  ಝಾರ್ಗ್ರಾಮ್, ನಾಡಿಯಾ ಮತ್ತು ದಕ್ಷಿಣ 24 ಪರ್ಗಾನಗಳಲ್ಲಿ  ಸಾರ್ವಜನಿಕ ಸಮಾವೇಶಗಳನ್ನುದ್ದೇಶಿಸಿ ಮಾತನಾಡಬೇಕಿತ್ತು. ಆದರೆ ಅನಾರೋಗ್ಯಕ್ಕೀಡಾಗಿರುವ ಹಿನ್ನೆಲೆಯಲ್ಲಿ ಅಮಿತ್ ಶಾ ಬದಲು ಸ್ಮೃತಿ ಇರಾನಿ ಸಮಾವೇಶಗಳಲ್ಲಿ ಭಾಗಿಯಾಗಿ ಭಾಷಣ ಮಾಡಲಿದ್ದಾರೆ. 
ಈ ಬಗ್ಗೆ ಸ್ವತಃ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಮಾಹಿತಿ ನೀಡಿದ್ದು,  ಬಿರ್ಭಮ್ ನಲ್ಲಿ ಸ್ಮೃತಿ ಇರಾನಿ ಸಮಾವೇಶದ ನೇತೃತ್ವ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com